ಬೆಂಗಳೂರು, ಸೆ. 1: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀ ವಿರುದ್ಧ ದಾಖಲಾಗಿರುವ ಮತ್ತೊಂದು ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಐಡಿ ಮೂಲಕ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಿರಿನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ ಎಂದರು. ಈಗಾಗಲೆ ರಾಮಕಥಾ ಗಾಯಕಿ ಪ್ರೇಮಲತಾ ರಾಘವೇಶ್ವರ ಸ್ವಾಮಿ ವಿರುದ್ಧ ದಾಖಲಿಸಿರುವ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸು ತ್ತಿದ್ದಾರೆ. ಈ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗುವುದು ಎಂದು ಹೇಳಿದರು.
ಕರ್ನಾಟಕ