ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಾಲ್ವರು ಆರೋಪಿಗಳಿಗೆ ಮಂಗಳವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಲೋಕಾಯುಕ್ತ ಪಿಆರ್ಒ ಸೈಯ್ಯದ್ ರಿಯಾಜ್, ಬಿ.ಎಂ. ಶ್ರೀನಿವಾಸಗೌಡ, ಶಂಕರೇಗೌಡ ಹಾಗೂ ಅಶೋಕ್ ಕುಮಾರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಕೋರ್ಟ್, ಸೆಪ್ಟೆಂಬರ್ 16ರಿಂದ ಜಾರಿಗೆ ಬರುವಂತೆ ಜಾಮೀನು ಮಂಜೂರು ಮಾಡಿದ್ದಾರೆ.
ಸೆ.16ರೊಳಗೆ ಚಾರ್ಜ್ಶೀಟ್ ಸಲ್ಲಿಸುವುದಾಗಿ ಸರ್ಕಾರಿ ವಿಶೇಷ ಅಭಿಯೋಜಕರು ಕೋರ್ಟ್ಗೆ ತಿಳಿಸಿದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಅಂದಿನಿಂದ ಜಾಮೀನು ನೀಡಲಾಗಿದೆ.
ಈ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.