ಕರ್ನಾಟಕ

ನಿನ್ನೆ ದೋಸ್ತಿ; ಇಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Pinterest LinkedIn Tumblr

Zameer-Ahmedಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಕುರಿತಂತೆ ನಿನ್ನೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರ ಸ್ಥಾಪಿಸಿದ್ದ ಜೆಡಿಎಸ್ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಬೆಂಗಳೂರಿನ ಪಾದರಾಯನಪುರದ ಹಜ್ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಮೈತ್ರಿ ಮರುದಿನವೇ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂ ಮತ ಪಡೆದು ಕಾಂಗ್ರೆಸ್ ಅಧಿಕಾರ ಅನುಭವಿಸಿದೆ. ಮುಸ್ಲಿಂರಿಗೆ ಮೋಸ ಮಾಡಿದ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ನಂಬದಿರಲು ಮುಸ್ಲಿಂ ಸಮುದಾಯಕ್ಕೆ ಜಮೀರ್ ಕರೆ ನೀಡಿದ್ದಾರೆ.

ಸಮಾರಂಭದಲ್ಲಿ ಜೆಡಿಎಸ್ ನ ರಾಷ್ಟ್ರಾಧ್ಯಕ್ಷ ಹೆಚ್.ಡಿ ದೇವೇಗೌಡರ ಅವರ ಉಪಸ್ಥಿತಿ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸ್ಥಾನ ಸಿಕ್ಕರೆ ನನಗೆ ಸಿಎಂ ಸ್ಥಾನ ಸಿಕ್ಕಷ್ಟು ಖುಷಿಯಾಗುತ್ತದೆ ಎಂಬ ಹೇಳಿದ್ದಾರೆ. ಹೆಚ್ ಡಿಕೆ ಸಿಎಂ ಆಗುವ ಅವಧಿಯಲ್ಲಿ ನನ್ನ ಕೆಲಸ ನೋಡಿ, ನಾನು ಎಷ್ಟು ಕೆಲಸ ಮಾಡ್ತೀನಿ ಎಂದು ನೋಡ್ತಾ ಇರಿ ಎಂದು ಜಮೀರ್ ಹೇಳಿದ್ದಾರೆ.

Write A Comment