ಕರ್ನಾಟಕ

ರಾಘವೇಶ್ವರ ಶ್ರೀ ಪ್ರಕರಣದ ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಟಿಬಿ ಜಯಚಂದ್ರ

Pinterest LinkedIn Tumblr

jayachandra_raghawesharaಬೆಂಗಳೂರು: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರರವರು ಸ್ಪಷ್ಟನೇ ನೀಡಿದ್ದಾರೆ.

ಸರ್ಕಾರ ಕಾನೂನು ರೀತಿ ನಡೆದುಕೊಳ್ಳುತ್ತಿದ್ದು, ತನಿಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಲ್ಲದೇ, ಈ ಪ್ರಕರಣದ ಸಂಬಂಧ ನಿನ್ನೆ ಕೇಂದ್ರ ಮಹಿಳಾ ಆಯೋಗದ ಅಧ್ಯಕ್ಷರು ತಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಅವರಿಗೂ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ.

ರಾಘವೇಶ್ವರ ಶ್ರೀಗಳಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ಬಂಧಿಸಲು ಸಾಧ್ಯವಾಗಿಲ್ಲ ಅವರು ಹೇಳಿದ್ದಾರೆ.

Write A Comment