ಮೈಸೂರು, ಸೆ.25- ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ವಿದೇಶದಿಂದ ಬಂದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ಸಚಿವ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಇಂದು ಅರಮನೆ ಆವರಣದಲ್ಲಿ ನಡೆದ ಫಿರಂಗಿಗಳ ಪೂಜೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಿಶ್ಚಿತವಾಗಿದ್ದು, ಅದರ ಪ್ರಕ್ರಿಯೆ ರಾಹುಲ್ಗಾಂಧಿ ಭಾರತಕ್ಕೆ ಹಿಂದಿರುಗಿದ ಮೇಲೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮದವರು ಸಂಪುಟ ವಿಸ್ತರಣೆ ಬಗ್ಗೆ ಇಲ್ಲಸಲ್ಲದ ವರದಿ ಪ್ರಕಟಿಸುತ್ತಿದ್ದಾರೆ. ಇದನ್ನು ಅವರು ಮೊದಲು ನಿಲ್ಲಿಸಲಿ ಎಂದ ಅವರು, ಒಂದು ಹಂತದಲ್ಲಿ ಮಾಧ್ಯಮದವರೇ ಪ್ರಮಾಣವನ್ನು ಕೊಡಿಸಿ ಬಿಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.