ಕರ್ನಾಟಕ

ಬಿಜೆಪಿ ಸೋಲು; ಇದು ಮೋದಿ, ಶಾ ವೈಯಕ್ತಿಕ ಸೋಲು: ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

Siddaramaiah

ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕುಗ್ಗುತ್ತಿರುವ ಮೋದಿಯ ಜನಪ್ರಿಯತೆ ಕಾರಣ. ಇದು ಮೋದಿ ಮತ್ತು ಅಮಿತ್ ಶಾ ಅವರ ಸ್ಪಷ್ಟ ಸೋಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಬಿಹಾರದ ಜನತೆ ಸೋಲಿಸಿದ್ದು, ಇದು ಜಾತ್ಯತೀತ ಶಕ್ತಿಗಳು ಮತ್ತು ಸಾಮಾಜಿಕ ನ್ಯಾಯಕ್ಕೆ ಸಿಕ್ಕಿರುವ ಜಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ನಿತೀಶ್ ಕುಮಾರ್, ಸೋನಿಯಾ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ನಿತೀಶ್ ಕುಮಾರ್ ಅವರ ಕ್ಲೀನ್ ಇಮೇಜ್, ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಜನರು ಅವರಿಗೆ ವೋಟ್ ಮಾಡಿದ್ದಾರೆ. ಮೋದಿ ಕಳೆದ ಲೋಕಸಭೆ ಚುನಾವಣೆಗಳಲ್ಲಿ ನೀಡಿದ್ದ ಭರವಸೆಗಳು ಹುಸಿಯಾಗಿವೆ. ಇದರಿಂದ ಜನತೆಗೆ ಭ್ರಮನಿರಸನವಾಗಿದೆ ಎಂದು ಅಭಿಪ್ರಾಯಪಟ್ಟರು.

Write A Comment