ಕರ್ನಾಟಕ

ಮಡಿಕೇರಿ ಘರ್ಷಣೆ; ಗುಂಡೇಟಿಗೆ ಬಲಿಯಾದ ಮೃತ ಸಾಹಿಲ್‌ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ

Pinterest LinkedIn Tumblr

dinesh_gundu_roa

ಮಡಿಕೇರಿ: ‘ಮಡಿಕೇರಿ ಗಲಭೆ ಸಂದರ್ಭದಲ್ಲಿ ಗುಂಡೇಟಿನಿಂದ ಗಾಯಗೊಂಡು ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ ಸಾಹಿಲ್‌ ಅಹಮ್ಮದ್‌ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಟಿಪ್ಪು ಸುಲ್ತಾನ್‌ ಜನ್ಮದಿನ ಆಚರಣೆ ವೇಳೆ ಸಂಭವಿಸಿದ ಗಲಭೆ ಪೀಡಿತ ಮಡಿಕೇರಿಗೆ ಗುರುವಾರ ಮಧ್ಯಾಹ್ನ ಸಚಿವ ದಿನೇಶ್‌ ಗುಂಡೂರಾವ್‌ ಭೇಟಿ ನೀಡಿದರು.

ಟಿಪ್ಪು ಸುಲ್ತಾನ್‌ ಜನ್ಮದಿನ ಆಚರಣೆ ವೇಳೆ ಸಂಭವಿಸಿದ ಹಿಂಸಾಚಾರದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಲಾಗುವುದು. ಶಾಂತಿ ಕಾಪಾಡಲು ಜನತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ನ್ಯಾಯಾಂಗ ತನಿಖೆ?: ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವ ಕುರಿತು ಸೋಮವಾರ ಆರಂಭವಾಗಲಿರುವ ಅಧಿವೇಶನದಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Write A Comment