ಬೆಂಗಳೂರು, ನ.13-ಕುರುಬ ಸಮಾಜದ ಬಗ್ಗೆ ಲಘುವಾಗಿ ಮಾತನಾಡಿ ಅವಮಾನ ಮಾಡಿರುವ ಸಂಸದ ಪ್ರತಾಪ್ಸಿಂಹ ಅವರು ಬಹಿರಂಗವಾಗಿ ಕ್ಷಮೆ ಯಾಚಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಸಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಟಿ.ವೆಂಕಟೇಶ ಮೂರ್ತಿ ಯ ಸಣ್ಣಕ್ಕಿ ಮಾತನಾಡಿ, ಟಿಪ್ಪುಸುಲ್ತಾನ್ ಜಯಂತಿಯನ್ನು ವಿರೋಧಿಸಿರುವ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜದ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ ಎಂದರು. ಯಾರೂ ಸಹ ಹಿಂದುಳಿದ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ.
ಟಿಪ್ಪುಸುಲ್ತಾನ್ ಜಾತ್ಯಾತೀತ ನಾಯಕನಾಗಿದ್ದ. ಹಿಂದುಗಳ ದೇವಾಲಯವನ್ನು ರಕ್ಷಿಸಿ ನೆರವು ನೀಡಿದ್ದ. ಇದಕ್ಕೆ ಹಲವಾರು ಉದಾಹರಣೆಗಳಿವೆ. ಬಿಜೆಪಿಯವರು ಟಿಪ್ಪುಸುಲ್ತಾನ್ ಮುಸ್ಲಿಂ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದವರ ನಾಯಕ ರಾಗಿದ್ದಾರೆ. ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಅವರನ್ನು ಕುರಿತು ಹಾಗೂ ಕುರುಬ ಸಮುದಾಯ ಕುರಿತು ಲಘುವಾಗಿ ಮಾತನಾಡಬಾರದು. ಪ್ರತಾಪ್ ಸಿಂಹ ಅವರು ಕ್ಷಮೆ ಯಾಚಿಸದಿದ್ದರೆ ನ.18ರಂದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಸಣ್ಣಕ್ಕಿ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಉಪಾಧ್ಯಕ್ಷ ಟಿ.ವೆಂಕಟೇಶ ಮೂರ್ತಿ, ಆರ್.ರಾಮಕೃಷ್ಣ ಇದ್ದರು.