ಮೈಸೂರು: ಮೈಸೂರಿನ ಮಹಾನಗರಪಾಲಿಕೆ ಮೇಯರ್ ಭೈರಪ್ಪ ಅವರ ಕೈಹಿಡಿದು ಎಳೆದಾಡಿದ ಕಾಂಗ್ರೆಸ್ ಸದಸ್ಯರು ನಂತರ ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದಿದೆ. ಕಾಂಗ್ರೆಸ್ ಸದಸ್ಯರು, ಮೇಯರ್ ನಡುವೆ ಮಾತಿನ ಚಕಮಕಿ ನಡೆದ ನಂತರ ಕಾಂಗ್ರೆಸ್ ಸದಸ್ಯರು ಅವರನ್ನು ಕೊಠಡಿಯಲ್ಲಿ ಕೂಡಿಹಾಕಿದರು.
ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ಮೇಯರ್ ಏಕಾಏಕಿ ಮುಂದೂಡಿದ್ದರಿಂದ ಕಾಂಗ್ರೆಸ್ ಸದಸ್ಯರು ಕೋಪಗೊಂಡು ಮೇಯರ್ ಭೈರಪ್ಪ ಅವರ ಕೈಹಿಡಿದು ಎಳೆದಾಡಿದರು.
ಯಾರನ್ನು ಕೇಳಿ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮುಂದೂಡಿದ್ದೀರಿ ಎಂದು ಪ್ರಶ್ನಿಸಿದರು. ನಂತರ ಅವರನ್ನು ಕೊಠಡಿಯಲ್ಲಿ ಕೂಡಿಹಾಕಿದರು. ಅಷ್ಟರಲ್ಲಿ ಪೊಲೀಸರು ಆಗಮಿಸಿ ಮೇಯರ್ ಅವರನ್ನು ಕೊಠಡಿಯಿಂದ ಬಿಡಿಸಿದ ಮೇಲೆ ಪರಿಸ್ಥಿತಿ ತಿಳಿಯಾಯಿತು.