ಕರ್ನಾಟಕ

ಹೆಣ್ಣು ಮಕ್ಕಳಿಗೆ ‘ಪರಿಹಾರ’ ನೀಡಲು ಕೇಂದ್ರಕ್ಕೆ ಪತ್ರ: ಸಚಿವ ರಮಾನಾಥ ರೈ

Pinterest LinkedIn Tumblr

raiಬೆಂಗಳೂರು, ನ. 23: ರಾಜ್ಯದ ಹುಲಿ ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಉದ್ಯಾ ನವನ, ಅಭಯಾರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಪುನರ್ವ ಸತಿಯನ್ನು ಕಲ್ಪಿಸುವ ವೇಳೆ ಗಂಡು ಮಕ್ಕಳಿಲ್ಲದ ಕುಟುಂಬಗಳಲ್ಲಿನ ಹೆಣ್ಣು ಮಕ್ಕಳಿಗೆ ಪರಿಹಾರ ನೀಡಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಅರಬೈಲ್ ಶಿವರಾಮ್ ಹೆಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಪರಿಹಾರ ನೀಡಲು ಅವಕಾಶವಿಲ್ಲ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೇಂದ್ರದಿಂದ ಅನುಮೋದನೆ ಪಡೆದು ಹೆಣ್ಣು ಮಕ್ಕಳಿಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Write A Comment