ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಖ್ಯಾತಿಯ, ನಟ ಹುಚ್ಚ ವೆಂಕಟ್ಗೆ ಸಿಟಿ ಸಿವಿಲ್ ಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹುಚ್ಚ ವೆಂಕಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 17ನೇ ಸಿಟಿ ಸಿವಿಲ್ ಕೋರ್ಟ್, ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಸ್ತುತ ಹುಚ್ಚ ವೆಂಕಟ್ ಪರಪ್ಪನ ಅಗ್ರಹಾರ ಜೈಲಿನಲ್ಲಿನಲ್ಲಿದ್ದು, ಕೋರ್ಟ್ಗೆ ಶ್ಯೂರಿಟಿ ನೀಡದ ಹಿನ್ನೆಲೆಯಲ್ಲಿ ಇಂದು ಜೈಲುನಿಂದ ಬಿಡುಗಡೆಯಾಗುವುದು ಅನುಮಾನ.
ಖಾಸಗಿ ಟಿವಿ ಚಾನೆಲ್ ವೊಂದರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಬಗ್ಗೆ ಕೇಳಲಾದ ಪ್ರಶ್ನೆಗೆ ಅವಹೇಳನಕಾರಿ ಉತ್ತರ ನೀಡಿದ್ದಕ್ಕೆ ದಲಿತ ಸಂಘಟನೆಗಳು ಹುಚ್ಚ ವೆಂಕಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು. ಅಲ್ಲದೇ ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಚ್ಚ ವೆಂಕಟ್ ನನ್ನು ಬಂಧಿಸಲಾಗಿತ್ತು.