ಕರ್ನಾಟಕ

ನಾನು ಪರಿಷತ್ ಚುನಾವಣಾ ಟಿಕೇಟ್ ಆಕಾಂಕ್ಷಿಯಲ್ಲ: ಯೂ ಟರ್ನ್ ಹೊಡೆದಿದ ನಟಿ ರಮ್ಯಾ

Pinterest LinkedIn Tumblr

ramy

ಬೆಂಗಳೂರು: ಮಂಡ್ಯ ಸ್ಥಳೀಯ ಸಂಸ್ಥೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿದ್ದ ಮಾಜಿ ಸಂಸದೆ, ನಟಿ ರಮ್ಯಾ ಅವರು ಯೂ ಟರ್ನ್ ಹೊಡೆದಿದ್ದಾರೆ.

ಸಚಿವ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ರಮ್ಯಾ ಅವರು, ತಾವು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ. ಪಕ್ಷ ಸೂಚಿಸಿದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಹಾಗೂ ವಸತಿ ಸಚಿವ ಅಂಬರೀಷ್ ನಾಯಕತ್ವದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಎರಡು ಬಣಗಳ ನಡುವಿನ ಸಮರ ಹಿನ್ನೆಲೆ ಒಮ್ಮತ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷರ ಸೂಚನೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಿದ್ದು, ಸಭೆಯಲ್ಲಿ ವಸತಿ ಸಚಿವ ಅಂಬರೀಷ್, ಮಾಜಿ ಸಂಸದೆ ರಮ್ಯಾ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಪಾಲ್ಗೊಂಡಿದ್ದರು.

ಮಾಜಿ ಸಂಸದೆ ರಮ್ಯಾಗೆ ಟಿಕೇಟ್ ಸಿಗೋದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯಗಳು ಮೂಡದ ಹಿನ್ನೆಲೆಯಲ್ಲಿ ರಮ್ಯಾ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸದಾಗಿ ಹೇಳಿದ್ದಾರೆ.

Write A Comment