ಬೆಂಗಳೂರು, ನ.28-ಎಲ್ಲಾ ಪಕ್ಷದಂತೆ ನಮ್ಮ ಪಕ್ಷದಲ್ಲೂ ಭಿನ್ನಾಭಿಪ್ರಾಯಗಳಿರುವುದು ಸಹಜ. ಎಲ್ಲರೂ ಒಟ್ಟಾಗಿ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ವಸತಿ ಸಚಿವ ಅಂಬರೀಶ್ ತಿಳಿಸಿದ್ದಾರೆ.
ಮೇಲ್ಮನೆ ಚುನಾವಣೆಗೆ ಮಂಡ್ಯ ಅಭ್ಯರ್ಥಿ ಆಯ್ಕೆ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಇಂದು ನಡೆದ ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಂತೆ ನಮ್ಮಲ್ಲೂ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನೆಲ್ಲ ಬದಿಗೊತ್ತಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಗೆಲ್ಲಿಸುವುದು ನಮ್ಮ ಕರ್ತವ್ಯ. ಅಭ್ಯರ್ಥಿಯ ಆಯ್ಕೆ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು.
ಅವರು ಯಾವ ಅಭ್ಯರ್ಥಿಯನ್ನು ಘೋಷಿಸುತ್ತಾರೆ. ಅವರ ಪರವಾಗಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಅಂಬಿ ತಿಳಿಸಿದರು.