ಕರ್ನಾಟಕ

ತಮಿಳುನಾಡಿನಲ್ಲಿ ಜಲ ಪ್ರಳಯ: ತುರ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ ನೆರವು

Pinterest LinkedIn Tumblr

rain-tnಬೆಂಗಳೂರು: ಕುಂಭದ್ರೋಣ ಮಳೆಯಿಂದಾಗಿ ನೆರೆಯ ತಮಿಳುನಾಡಿನಲ್ಲಿ ಜಲ ಪ್ರಳಯ ಉಂಟಾಗಿದ್ದು, ತುರ್ತು ಪರಿಹಾರ ಕಾರ್ಯಕ್ಕೆ ನೆರವು ನೀಡುವುದಾಗಿ ಬುಧವಾರ ರಾಜ್ಯ ಸರ್ಕಾರ ಘೋಷಿಸಿದೆ.

ತಮಿಳುನಾಡಿಗೆ 5 ಕೋಟಿ ಪರಿಹಾರದ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ತಮಿಳುನಾಡು ಅಧಿಕಾರಿಗಳೊಂದಿಗೆ ಚರ್ಚಿಸಿ, ಔಷಧಿ ಹಾಗೂ ಅಗತ್ಯ ಪರಿಹಾರ ಸಾಮಗ್ರಿ ಪೂರೈಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದ 1 ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ತತ್ತರಿಸಿದ್ದ ಚೆನ್ನೈನಲ್ಲಿ ಮತ್ತೆ ಮಳೆಯಾಗುತ್ತಿದ್ದು, ನಗರವೆಲ್ಲಾ ಸಂಪೂರ್ಣ ಜಲಮಯವಾಗಿದೆ.

Write A Comment