ಕರ್ನಾಟಕ

ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದ ಶಿಕ್ಷಕಿ ಅಮಾನತು

Pinterest LinkedIn Tumblr

teacher

ಮಂಡ್ಯ, ಡಿ.5: ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕಿಯೊಬ್ಬರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪಾಂಡವಪುರ ತಾಲೂಕಿನ ಟಿ.ಎಸ್.ಛತ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಸವಿತಾ ಹೆಗಡೆ ಅಮಾನತುಗೊಂಡಿದ್ದಾರೆ. ಕಳೆದ ಡಿ.2 ರಂದು ಶಿಕ್ಷಕಿ ಸವಿತಾ ಮತ್ತು ಸಹೋದ್ಯೋಗಿ ಶಿಕ್ಷಕರು ಶಾಲೆಯ ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಘಟನೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಆಧರಿಸಿ ಡಿಡಿಪಿಐ ಶಿವಮಾದಪ್ಪ ಅವರು ಶಿಕ್ಷಕಿ ಸವಿತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Write A Comment