ಕರ್ನಾಟಕ

‘ಶೋಕಿಗಾಗಿ ಕಸಗೂಡಿಸಬೇಡಿ’ : ಪ್ರಹ್ಲಾದ್ ಜೋಶಿಗೆ ಮಹಿಳೆಯರ ಹಿಗ್ಗಾಮುಗ್ಗಾ ತರಾಟೆ

Pinterest LinkedIn Tumblr

joshiಹುಬ್ಬಳ್ಳಿ,ಡಿ.25-ನಗರದ ದಾಜೀಬಾನ್ ಪೇಟೆಯಲ್ಲಿಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸ್ವಚ್ಛ ಭಾರತ ಅಭಿಯಾನದಲ್ಲಿ ಕಸಗೂಡಿಸುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಮತ್ತು ಮಹಿಳೆಯರು ಮುತ್ತಿಗೆ ಪ್ರತಿಭಟಿಸಿ ತರಾಟೆಗೆ ತೆಗೆದುಕೊಂಡಿದ್ದರಿಂದ ತೀವ್ರ ಮುಜುಗರಕ್ಕೀಡಾದ ಪ್ರಸಂಗ ನಡೆಯಿತು.

ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಇಂದು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಉತ್ತಮ ಆಡಳಿತ ದಿನ ಹಾಗೂ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಈ ಪ್ರಸಂಗ ನಡೆಯಿತು.  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಹ್ಲಾದ್ ಜೋಶಿ ಕಸಗೂಡಿಸಲು ಮುಂದಾಗುತ್ತಿದ್ದಂತೆಯೇ ಅಲ್ಲಿನ ಮಹಿಳೆಯರು ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ, ಇಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಹಲವಾರು ಮೂಲಭೂತ ಸಮಸ್ಯೆಗಳಿವೆ.

ಮೊದಲು ಅವುಗಳನ್ನು ಬಗೆಹರಿಸಿ, ನೀವು ಶೋಕಿಗಾಗಿ ಕಸಗೂಡಿಸುವುದರಿಂದ ಜನರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಭರವಸೆ:
ಇದೇ ವೇಳೆ ಮಹಿಳೆಯರ ಸಮಸ್ಯೆಗಳನ್ನು ಶಾಂತಚಿತ್ತಿದಿಂದ ಆಲಿಸಿದ ಸಂಸದರು, ಈ ಕೂಡಲೇ ನಿಮ್ಮ ಸಮಸ್ಯೆ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

Write A Comment