ಕಲಬುರಗಿ: ಇಲ್ಲಿನ ಹುಮನಾಬಾದ ರಿಂಗ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದಾರೆ ಎಂಬ ಮಾಹಿತಿಯ ಮೇಲೆ ದಾಳಿ ನಡೆಸಿದ ಪೊಲೀಸರು ಮಾರ್ಕೆಟ್ ಸತೀಶ್ ಮತ್ತು ಗಾಜಿಪುರದ ರೋಹಿತ್ ಎಂಬಾತನನ್ನು ಬಂಧಿಸಿ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಕುಮಾರ, ಅಜಿಮ, ವಿಕ್ರಮ ಪ್ರಸಾದ ಮತ್ತು ಸಚಿನ್ ಮೆಹತರ್ ಎಂಬುವವರನ್ನು ಪರಾರಿಯಾಗಿದ್ದು, ಅವರ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್ಐ ಹುಸೇನ್ ಭಾಷಾ ಹಾಗೂ ಸಿಬ್ಬಂದಿ ದಾಳಿ ನಡೆಸಿ ದರೋಡೆಗೆ ಹೊಂಚು ಹಾಕಿದ್ದ ಮಾರ್ಕೆಟ್ ಸತೀಶ್ ಮತ್ತು ರೋಹಿತ್ ಎಂಬುವವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಪರಾರಿಯಾದ ನಾಲ್ವರ ಬಂಧನಕ್ಕೆ ಜಾಲ ಬೀಸಿದ್ದಾರೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ
16 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯೊಬ್ಬಳನ್ನು ಆಟೋದಲ್ಲಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಗಜಾನನ ಎಂಬಾತನೆ ಅಪ್ರಾಪ್ತ ಬಾಲಕಿಯನ್ನು ಆಟೋದಲ್ಲಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ನಾಗೇಂದ್ರ, ಬಾಲಿ, ರುಪೇಶ್ ಇತನಿಗೆ ಸಹಕಾರ ನೀಡಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ನಡೆದಿದೆ.