ಕರ್ನಾಟಕ

ಬೆಂಗಳೂರಲ್ಲಿ ಬೀಫ್ ತಿಂದ ಕೇರಳದ ವಿದ್ಯಾರ್ಥಿಗಳ ಮೇಲೆ ಸ್ಥಳೀಯರಿಂದ ಹಲ್ಲೆ

Pinterest LinkedIn Tumblr

beef

ಬೆಂಗಳೂರು: ಬೆಂಗಳೂರಿನ ಭೂಪಸಂದ್ರದಲ್ಲಿ ವಾಸಿಸುತ್ತಿರುವ ವೃಂದಾವನ್ ಕಾಲೇಜಿನ ವಿದ್ಯಾರ್ಥಿಗಳು ಬೀಫ್ ತಿಂದದ್ದಕ್ಕಾಗಿ ಅಲ್ಲಿನ ನಿವಾಸಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕೇರಳ ಮೂಲದ ನಿಖಿಲ್, ಮೈಕಲ್ ಮೆರ್ವಿನ್, ಮುಹಮ್ಮದ್ ಹಾಶಿರ್ ಎಂಬ ವಿದ್ಯಾರ್ಥಿಗಳಿಗೆ ಸ್ಥಳೀಯರು ಥಳಿಸಿದ್ದಾರೆ. ಈ ವಿದ್ಯಾರ್ಥಿಗಳು ವಾಸಿಸುತ್ತಿರುವ ಮನೆಯ ಬಳಿ ದೇವಸ್ಥಾನ ಇರುವುದರಿಂದ ಅಲ್ಲಿ ಬೀಫ್ ಭಕ್ಷಿಸುವಂತಿಲ್ಲ ಎಂದು ಈ ಹಿಂದೆಯೇ ಸ್ಥಳೀಯರು ಮುನ್ನೆಚ್ಚರಿಕೆ ನೀಡಿದ್ದರು. ಆದರೆ ಇದನ್ನು ಕಡೆಗಣಿಸಿ ಈ ವಿದ್ಯಾರ್ಥಿಗಳು ಬೀಫ್ ಕರಿ ಮಾಡಿದ್ದರು. ಇದನ್ನು ತಿಳಿದ ಸ್ಥಳೀಯರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೆರ್ವಿನ್ ಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಸು ದಾಖಲಿಸಿದ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Write A Comment