ಕರ್ನಾಟಕ

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಂದು ಪರಾರಿಯಾಗುತ್ತಿದ್ದ ಕಾಮುಕನಿಗೆ ಸಾರ್ವಜನಿಕರಿಂದ ಧರ್ಮದೇಟು

Pinterest LinkedIn Tumblr

rapeರಾಯಚೂರು, ಫೆ.27- ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಕಾಮುಕನನ್ನು ಸಾರ್ವಜನಿಕರೇ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಹರಿಜನವಾಡದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದು ಮಾರ್ಕೆಟ್‌ಯಾರ್ಡ್ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಸುಮಾರು 30 ವರ್ಷದ ಮಹಿಳೆಯನ್ನು ಈತ ಕೊಲೆ ಮಾಡಿ ನಂತರ ಶವವನ್ನು ಬಿಸಾಡಲು ಹೊತ್ತೊಯ್ಯುವಾಗ ಅನುಮಾನಗೊಂಡ ಸಾರ್ವಜನಿಕರು ಆತನನ್ನು ತಡೆದು ಪರಿಶೀಲಿಸಿದಾಗ ಈ ಹೀನ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ.

ನಂತರ ಶವವನ್ನು ಅಲ್ಲೇ ಬಿಟ್ಟು ಓಟ ಕಿತ್ತ ಆತನನ್ನು ಸಾರ್ವಜನಿಕರು ಹಿಂಬಾಲಿಸಿ ಹಿಡಿದು ಧರ್ಮದೇಟು ನೀಡಿದ್ದಾರೆ. ಮೃತಪಟ್ಟಿರುವ ಮಹಿಳೆ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಆದರೆ ಆರೋಪಿ ನಗರದ ನಿವಾಸಿ ಬೊಂಬಯ್ಯ ಎಂದು ತಿಳಿದುಬಂದಿದೆ.

Write A Comment