ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಗೈರಾಗಿದ್ದ ವಿನಯಕುಮಾರ್, ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದ್ರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿನಯಕುಮಾರ್, ರಾಜ್ಯದ ಅತ್ಯುನ್ನತ ಪ್ರಶಸ್ತಿ ಸಿಕ್ಕಿದ್ದು ಸಂತಸ ತಂದಿದೆ. ಟೂರ್ನಮೆಂಟ್ನಲ್ಲಿದ್ದ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಸ್ವೀಕರಿಸಲಾಗಿರಲಿಲ್ಲ ಅಂದ್ರು.
ಇದೇ ವೇಳೆ ವಿಶ್ವಕಪ್ ಟಿ-20ಗೆ ಭಾರತ ತಂಡಕ್ಕೆ ಆಯ್ಕೆ ಆಗದ ಬಗ್ಗೆ ಮಾತನಾಡಿದ ಅವರು ತಂಡಕ್ಕೆ ಆಯ್ಕೆಯಾಗದಿದ್ದರೂ ಯಾವಾಗ ಬೇಕಾದ್ರು ಕಮ್ ಬ್ಯಾಕ್ ಅಗಬಹುದು. ಸದ್ಯದಲ್ಲೇ ಕರೆ ಬರೋ ನಿರೀಕ್ಷೆಯಲ್ಲಿದ್ದೇನೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.