ಕರ್ನಾಟಕ

ಮಲವಿಸರ್ಜನೆ ಮಾಡಿದ್ದಕ್ಕೆ ಬಾಲಕನ ಗುದದ್ವಾರಕ್ಕೆ ಕೋಲು ಹಾಕಿದ!

Pinterest LinkedIn Tumblr

davana

ದಾವಣಗೆರೆ: ಮನೆ ಮುಂದೆ ಮಲವಿಸರ್ಜನೆ ಮಾಡಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿ, 6 ವರ್ಷದ ಬಾಲಕನ ಗುದದ್ವಾರಕ್ಕೆ ಕೋಲು ಹಾಕಿರುವ ಅಮಾನವೀಯ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಮಾಯಕೊಂಡ ಹೋಬಳಿಯ ನರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವಕ ಅಂಜಿನ್ ರೇವಣಪ್ಪ ಈ ಕೃತ್ಯವನ್ನು ಎಸಗಿದ್ದಾನೆ.

ಘಟನೆಯಲ್ಲಿ 6 ವರ್ಷದ ಬಾಲಕ ಗಂಭಿರವಾಗಿ ಗಾಯಗೊಂಡಿದ್ದು, ದಾವಣಗೆರೆಯ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment