ಬೆಂಗಳೂರು:ಉದ್ಯಾನನಗರಿ ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.
ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದ್ದು, ಕೆರೆ ದಂಡೆಯಲ್ಲಿ ಲಕ್ಷಾಂತರ ಮೀನುಗಳು ತೇಲುತ್ತಿವೆ. ಇದರಿಂದಾಗಿ ಕೆರೆ ಸುತ್ತಮುತ್ತ ದುರ್ನಾತ ಬೀರುತ್ತಿದೆ. ಹತ್ತಾರು ಎಕರೆ ಪ್ರದೇಶದಲ್ಲಿ ಹರಡಿರುವ ಅಲಸೂರು ಕರೆಗೆ ಕಲುಷಿತ ನೀರು ಸೇರ್ಪಡೆಯಿಂದಾಗಿ ಲಕ್ಷಾಂತರ ಮೀನುಗಳು ಬಲಿಯಾಗಿರಬೇಕೆಂದು ಸಂಶಯ ವ್ಯಕ್ತವಾಗುತ್ತಿದೆ.
ಕೆರೆಯಲ್ಲಿರುವ ಸಾವಿರಾರು ಮೀನುಗಳು ಹೇಗೆ ಸತ್ತವು…ಇದು ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿವೆಯೇ ಅಥವಾ ವಿಷಪ್ರಾಶನದಿಂದ ಸಾವನ್ನಪ್ಪಿವೆ ಎಂಬ ಬಗ್ಗೆ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.
-ಉದಯವಾಣಿ