ಬಳ್ಳಾರಿ, ಮಾ.14-ಕೊಪ್ಪಳ ಜಿಲ್ಲೆ ಯಲಬುರ್ಗದ ತಹಶೀಲ್ದಾರ್ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅತ್ಯಾಚಾರ ಸಂಬಂಧ ಕಂಪ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ.
ಕಳೆದ ಐದಾರು ತಿಂಗಳಿನಿಂದ ಸ್ನೇಹ ಹೊಂದಿ ದೌರ್ಜನ್ಯ ನಡೆಸಿದ್ದಾರೆ ಎಂದು ದಾಕ್ಷಾಯಿಣಿ ಎಂಬ ಅಂಗನವಾಡಿ ಕಾರ್ಯಕರ್ತೆ ದೂರು ನೀಡಿದ್ದಾರೆ. ಈ ಘಟನೆ ಈಗ ಉತ್ತರ ಕನ್ನಡದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ತಹಶೀಲ್ದಾರ್ ಶಿವಕುಮಾರ್ ಪ್ರಸ್ತುತ ಎಲ್ಲಿದ್ದಾರೆ ಎಂಬುದು ಕೂಡ ತಿಳಿದುಬಂದಿಲ್ಲ.
ಕಂಪ್ಲಿ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಆರೋಪಿಯ ಬಂಧನ ಸಾಧ್ಯತೆ ದಟ್ಟವಾಗಿದೆ.