ಕರ್ನಾಟಕ

ಬಿಎಂಟಿಸಿ ಬಸ್ ಡಿಕ್ಕಿ ಮಹಿಳೆ ಸಾವು

Pinterest LinkedIn Tumblr

death

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಅಪರಿಚಿತ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗ್ಗೆ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಬಳಿ ನಡೆದಿದೆ.

ಬೆಳಗ್ಗೆ ಪ್ರಸನ್ನ ಥಿಯೇಟರ್ ಮುಂಭಾಗ ರಸ್ತೆ ವಿಭಜಕ ದಾಟುತ್ತಿದ್ದ ಸುಮಾರು ೩೨ ವರ್ಷ ವಯಸ್ಸಿನ ಮಹಿಳೆ ಆಯತಪ್ಪಿ ಹಿಂದಕ್ಕೆ ಬಿದ್ದಿದ್ದು, ಇದೇ ವೇಳೆ ವೇಗವಾಗಿ ಮೆಜೆಸ್ಟಿಕ್ ಕಡೆಯಿಂದ ಜ್ಞಾನಭಾರತಿ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್ ಅವರ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಎಲ್ಲಾ ಠಾಣೆಗಳಿಗೆ ಮಹಿಳೆಯ ಭಾವಚಿತ್ರ ಕಳುಹಿಸಲಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಾಗಡಿ ರಸ್ತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದೆ. ಮಹಿಳೆಯ ಬಗ್ಗೆ ಮಾಹಿತಿ ಇರುವವರು ಪೊಲೀಸ್ ಠಾಣೆಯಲ್ಲಿ ಸಂಪರ್ಕಿಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರವಷ್ಟೆ ಶಿವಾಜಿನಗರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಮದ್ದೂರಮ್ಮನಪಾಳ್ಯದ ನಿವಾಸಿ ಸರೋಜಮ್ಮ (೫೫) ಎಂಬವರು ಮೃತಪಟ್ಟಿದ್ದರು. ಇದಕ್ಕಿಂತ ಎರಡು ದಿನಗಳ ಮೊದಲು ಯಶವಂತಪುರ ಬಸ್ ನಿಲ್ದಾಣದಲ್ಲಿ ಎರಡು ಬಸ್‌ಗಳ ನಡುವೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಳು. ನಗರದಲ್ಲಿ ಬಿಎಂಟಿಸಿ ಬಸ್‌ಗಳ ಯದ್ವಾತದ್ವ ಓಡಾಟದಿಂದ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ.

Write A Comment