ಕರ್ನಾಟಕ

ಕ್ಷುಲ್ಲಕ ವಿಚಾರಕ್ಕೆ ಯುವಕ ಬಲಿ

Pinterest LinkedIn Tumblr

dinesh

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಯುವಕನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ನಾಯಂಡಹಳ್ಳಿಯಲ್ಲಿ ನಡೆದಿದೆ.

ನಾಯಂಡಹಳ್ಳಿ ರೈಲ್ವೆ ಸ್ಟೇಷನ್ ಬಳಿ ನಿವಾಸಿ ದಿನೇಶ್ (೨೪) ಕೊಲೆಯಾಗಿರುವ ಯುವಕ. ದಿನೇಶ್‌ನನ್ನು ಚಾಕುವಿನಿಂದ ಇರಿದಿರುವ ದುಷ್ಕರ್ಮಿಗಳು, ಮೃತದೇಹವನ್ನು ರೈಲ್ವೆ ಹಳಿಗಳ ಮೇಲೆ ಎಸೆದು ಹೋಗಿದ್ದರು ಎನ್ನಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Write A Comment