ಹುಬ್ಬಳ್ಳಿ: ಇಲ್ಲಿನ ಕೇಂದ್ರ ರೈಲ್ವೆ ನಿಲ್ದಾಣದ ಪಾರ್ಸೆಲ್ ವಿಭಾಗದ ಕಟ್ಟಡ ಕುಸಿತ ಪ್ರಕರಣ ಸಂಬಂಧ ರೈಲ್ವೆ ಇಲಾಖೆಯ ವಿಭಾಗೀಯ ಸಹಾಯಕ ಎಂಜಿನಿಯರ್ ಒಬ್ಬರನ್ನು ಗುರುವಾರ ಬಂಧಿಸಲಾಗಿದೆ.
ನೈರುತ್ಯ ರೈಲ್ವೆಯ ಸಹಾಯಕ ಎಂಜಿನಿಯರ್ ರವೀಂದ್ರ ಬಿರಾದರ್ ಅವರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 8ರಂದು ರೈಲ್ವೆ ಇಲಾಖೆ ಪಸಾ೯ಲ್ ಕಟ್ಟಡ ಕುಸಿದು ಏಳು ಜನ ಮೃತಪಟ್ಟಿದ್ದರು. 15 ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕರ್ನಾಟಕ