ಕರ್ನಾಟಕ

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ:ಯಡಿಯೂರಪ್ಪ ಇತರರ ಬಂಧನ, ಬಿಡುಗಡೆ

Pinterest LinkedIn Tumblr

yaddiಮೈಸೂರು: ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದಾಗ ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತು.‘
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪಸಿಂಹ, ವಿಧಾನ ಪರಿಷತ್‌ ಸದಸ್ಯ ಸಿ.ಎಚ್. ವಿಜಯಶಂಕರ್ ಅಲ್ಲದೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ರಾಜು ಮನೆಗೆ ಭೇಟಿ ನೀಡಿದ ಯಡಿಯೂರಪ್ಪ ಹಾಗೂ ಇತರ ಮುಖಂಡರು ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಬಿಜೆಪಿ ವತಿಯಿಂದ ₹ 5 ಲಕ್ಷ ಚೆಕ್‌ ಹಾಗೂ ಹೋಟೆಲ್‌ ಉದ್ಯಮಿ ರಾಜೇಂದ್ರ ಅವರು ನೀಡಿದ ₹ 5 ಲಕ್ಷ ಚೆಕ್ ವಿತರಿಸಲಾಯಿತು.
ಎಸ್ಎಂಪಿ ಡೆವಲಪರ್ಸ್ ಕಡೆಯಿಂದ ರಾಜು ಕುಟುಂಬದವರಿಗೆ 20X40 ನಿವೇಶನ ದಾನ ನೀಡಲಾಗಿದೆ.

Write A Comment