ಕರ್ನಾಟಕ

ಬೆಂಗಳೂರಿನಲ್ಲಿ ಹಾಡಹಗಲೇ ಬೈಕ್ ಅಡ್ಡಗಟ್ಟಿ ರು.9 ಲಕ್ಷ ದರೋಡೆ

Pinterest LinkedIn Tumblr

atm-robbery

ಬೆಂಗಳೂರು: ದುಷ್ಕರ್ಮಿಗಳು ಹಾಡುಹಗಲೇ ಬೈಕ್ ಅಡ್ಡಗಟ್ಟಿ 9 ಲಕ್ಷ ರುಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮೇಲ್ವಿಚಾರಕ ವಿಶ್ವ ಎಂಬುವವರು 9 ಲಕ್ಷ ರುಪಾಯಿನ್ನು ಹಣವನ್ನು ಬ್ಯಾಂಕ್ ಗೆ ಕಟ್ಟಲು ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎರಡು ಪಲ್ಸರ್ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹಣದ ಬ್ಯಾಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment