ಬೆಂಗಳೂರು: ದ್ವಿತೀಯ ಪಿಯುಸಿಯ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಗುರುವಾರ ತಿಳಿಸಿದ್ದಾರೆ.
ವಿಧಾಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಸಾಯನಶಾಸ್ತ್ರ ಪತ್ರಿಕೆಯ ಮರು ಪರೀಕ್ಷೆಯನ್ನು ಮಾರ್ಚ್ 29ರ ಬದಲು 31ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಯು ಮಂಡಳಿ ತನಿಖೆಗೆ ಆದೇಶಿಸಿದ್ದು, ಈಗಾಗಲೇ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದರು.
ಕೋಲಾರದ ಮಾಲೂರು ಹಾಗೂ ಬಳ್ಳಾರಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್ಗಳಲ್ಲಿ ಪರೀಕ್ಷೆ ಆರಂಭವಾಗುವ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.