ಕರ್ನಾಟಕ

ಎಸಿಬಿ ರಚನೆ; ಸಿಎಂ ಸಿದ್ದರಾಮಯ್ಯ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್

Pinterest LinkedIn Tumblr

Kharge-Siddaramaiahಬೆಂಗಳೂರು: ಸುಮಾರು 15 ರಾಜ್ಯಗಳಲ್ಲಿ ಎಸಿಬಿ ರಚನೆಯಾಗಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಗೊಂದಲ ಸೃಷ್ಟಿಸೋದು ಬೇಡ. ರಾಜ್ಯದಲ್ಲಿ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ರಚಿಸಿರುವುದು ಸರಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಲೋಕಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಬ್ಯಾಟಿಂಗ್ ಬೀಸಿದ್ದಾರೆ.

ಶನಿವಾರ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದರು.

ರಾಜ್ಯ ರಾಜಕಾರಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಉಭಯ ನಾಯಕರು ಸಮಾಲೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಎಸಿಬಿ ಕುರಿತಂತೆ ಶಾಸಕರಿಗೆ ಅಸಮಾಧಾನವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸುವಂತೆ ಖರ್ಗೆಯವರು ಸಲಹೆ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
-ಉದಯವಾಣಿ

Write A Comment