ಕರ್ನಾಟಕ

ಟ್ಯಾಂಕರ್​ಗೆ ಕಾರು ಡಿಕ್ಕಿ, ಆಂಧ್ರ ಮೂಲದ ನಾಲ್ವರು ಬಲಿ

Pinterest LinkedIn Tumblr

Accidentನರಸಾಪುರ: ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಲಾರ ತಾಲೂಕು ನರಸಾಪುರ ಬೈಪಾಸ್​ನ ಖಾಜೀ ಕಲ್ಲಹಳ್ಳಿ ಗೇಟ್ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದ್ದು, ಶ್ರೀನಾಥ್ (25), ಅಮರೇಂದ್ರ ಬಾಬು(33) ಚಂದ್ರಶೇಖರ್ (30), ವೆಂಕಟನರೇಂದ್ರ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಭರತ್ ( 30) ಎಂಬುವವರು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ಐವರೂ ಆಂಧ್ರಪದೇಶದ ತಿರುಪತಿ ಸಮೀಪದವರಾಗಿದ್ದು, ತಿರುಪತಿಯಿಂದ ಬೆಂಗಳೂರಿಗೆ ಅದೇ ಮಾರ್ಗವಾಗಿ ತೆರಳುತ್ತಿದ್ದರುಗ್ಯಾಸ್ ಟ್ಯಾಂಕರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಚೆವರ್​ಲೆಟ್ ಕಾರು ನಜ್ಜುಗುಜ್ಜಾಗಿದ್ದು, ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

Write A Comment