ನರಸಾಪುರ: ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ಗೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೋಲಾರ ತಾಲೂಕು ನರಸಾಪುರ ಬೈಪಾಸ್ನ ಖಾಜೀ ಕಲ್ಲಹಳ್ಳಿ ಗೇಟ್ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದ್ದು, ಶ್ರೀನಾಥ್ (25), ಅಮರೇಂದ್ರ ಬಾಬು(33) ಚಂದ್ರಶೇಖರ್ (30), ವೆಂಕಟನರೇಂದ್ರ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಭರತ್ ( 30) ಎಂಬುವವರು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ಐವರೂ ಆಂಧ್ರಪದೇಶದ ತಿರುಪತಿ ಸಮೀಪದವರಾಗಿದ್ದು, ತಿರುಪತಿಯಿಂದ ಬೆಂಗಳೂರಿಗೆ ಅದೇ ಮಾರ್ಗವಾಗಿ ತೆರಳುತ್ತಿದ್ದರುಗ್ಯಾಸ್ ಟ್ಯಾಂಕರ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಚೆವರ್ಲೆಟ್ ಕಾರು ನಜ್ಜುಗುಜ್ಜಾಗಿದ್ದು, ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.