ಚನ್ನರಾಯಪಟ್ಟಣ: ಎಸ್ಎಸ್ಎಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರು ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಚನ್ನರಾಯಪಟ್ಟಣದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ಶಾಲೆ ಮುಖ್ಯ ಶಿಕ್ಷಕ ಚಂದ್ರ ಶೇಖರ್, ಸಹ ಶಿಕ್ಷಕ ಶಶಿಕುಮಾರ್ ಮತ್ತು ಡಿ ಗ್ರೂಪ್ ನೌಕರ ಮಂಜುನಾಥ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚನ್ನರಾಯಪಟ್ಟಣ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.