ಕರ್ನಾಟಕ

ಪ್ರೀತಿಗೆ ಮನೆಯವರು ವಿರೋಧ : ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

Pinterest LinkedIn Tumblr

premiಮೈಸೂರು,ಮೇ5-ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜ್(23) ಮತ್ತು ಪಲ್ಲವಿ(22) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಹೆಬ್ಬಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದು ,ಇವರ ನಡುವೆ ಪ್ರೇಮಾಂಕುರವಾಗಿದೆ.

ಬೆಳವಾಡಿಯ ಒಂದನೇ ಮುಖ್ಯರಸ್ತೆಯಲ್ಲಿ ತ್ಯಾಗರಾಜ್ ಬಾಡಿಗೆ ಮನೆ ಮಾಡಿಕೊಂಡಿದ್ದನು. ಈತನ ಜೊತೆ ಪಲ್ಲವಿಯೂ ವಾಸವಾಗಿದ್ದಳು. ಇವರಿಬ್ಬರ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ನೊಂದಿದ್ದ ಇವರಿಬ್ಬರು ಮನೆಯಲ್ಲಿ ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಈ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು ಬೆಳವಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಹೊಡೆದು ನೋಡಿದಾಗ ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Write A Comment