ಕರ್ನಾಟಕ

ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ

Pinterest LinkedIn Tumblr

bettingಬೆಂಗಳೂರು, ಮೇ 8-ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ ಪಣಕ್ಕಿಟ್ಟಿದ್ದ ಒಂದು ಲಕ್ಷ ಹಣ ಹಾಗೂ ಆರು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಪ್ರಕಾಶ್, ರಾಘವೇಂದ್ರ, ಮೆಹಬೂಬ್ ಬಂಧಿತ ಜೂಜುಕೋರರು. ಉಪ್ಪಾರಪೇಟೆ ವ್ಯಾಪ್ತಿಯ ಗಾಂಧಿನಗರದ 5ನೇ ಮುಖ್ಯರಸ್ತೆ, ಹನುಮಂತಪ್ಪ ರಸ್ತೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಈ ಮೂವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟಂತೆ ಆರ್‌ಸಿಬಿ ತಂಡ ಮತ್ತು ಪುಣೆ ಸೂಪರ್ ಗ್ರೈಂಟ್ಸ್ ತಂಡಗಳ ನಡುವೆ ಸೋಲು ಗೆಲುವಿನ ಬಗ್ಗೆ ಫೋನ್‌ಗಳ ಮುಖಾಂತರ ಸಾರ್ವಜನಿಕರಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಹಣವನ್ನು ಪಣವಾಗಿ ಕಟ್ಟಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿ ಮೂವರನ್ನು ಬಂಧಿಸಿ ಒಂದು ಲಕ್ಷ ರೂ., ಆರು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Write A Comment