ಕಾರವಾರ: ಕುಡಿದ ಮತ್ತಿನಲ್ಲಿ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಬೈಕ್ಗೆ ಗುದ್ದಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಬುಧವಾರ ನಡೆದಿದೆ.
ಪ್ರಕರಣ ಸಂಬಂಧ ಕಾರು ಸಮೇತ ಮೂವರು ಇರಾನ್ ಪ್ರವಾಸಿಗರನ್ನು ಕಾರವಾರ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇರಾನ್ ಮೂಲದ ಮೊರಾದ್, ಬೆನೆಮ್ ಹಾಗೂ ಅಜೀಂ ರಸ್ತಗರಿನ್ ಗೋವಾಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಅಂಕೋಲಾ ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ, ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡಿದ್ದ ವೀರೇಶ್ ಎಂಬುವನಿಗೆ ಡಿಕ್ಕಿ ಹೊಡೆದಿದ್ದರು. ಮದ್ಯದ ಅಮಲಿನಲ್ಲಿದ್ದ ಅವರು ಘಟನೆ ಬಳಿಕ ಪರಾರಿಗೆ ಯತ್ನಿಸಿದ್ದರು. ಆದರೆ, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ‘ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ.