ಕರ್ನಾಟಕ

ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಪರಿಣಾಮ ಇಬ್ಬರು ವಿದೇಶಿ ಪ್ರಜೆಗಳ ದುರ್ಮರಣ

Pinterest LinkedIn Tumblr

accidentಬೆಂಗಳೂರು, ಮೇ 14- ಮುಂದೆ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಹಿಂದಿನಿಂದ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದೇಶಿ ಪ್ರಜೆಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಆರ್ ಪುರ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಸೂಡಾನ್ ದೇಶದವರೆಂದು ಗುರುತಿಸಲಾಗಿದ್ದು, ಇವರು ಆಚಾರ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆಸರು-ವಿಳಾಸ ತಿಳಿದುಬಂದಿಲ್ಲ. ಔಟರ್‌ರಿಂಗ್ ರಸ್ತೆಯ ಕಸ್ತೂರಿ ನಗರದ ಬ್ರಿಡ್ಜ್ ಬಳಿ ಇಂದು ಬೆಳಗ್ಗೆ 6.45ರಲ್ಲಿ ವಿದೇಶಿ ಪ್ರಜೆಗಳಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ಮುಂದೆ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಅತಿ ವೇಗವಾಗಿ ಬಂದು ಬೈಕ್ ಅಪ್ಪಳಿಸಿದ ಪರಿಣಾಮ ಇವರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Write A Comment