ಕರ್ನಾಟಕ

ಸ್ವಚ್ಛ ಭಾರತ್ ರಾಜ್ಯಕ್ಕೆ ಕೇಂದ್ರ ಮೆಚ್ಚುಗೆ

Pinterest LinkedIn Tumblr

swaccha

ಬೆಂಗಳೂರು: ರಾಜ್ಯಸರ್ಕಾರ ಸ್ವಚ್ಛ ಭಾರತ್ ಯೋಜನೆ ಅನುಷ್ಠಾನದಲ್ಲಿ ಮಾಡಿರುವ ಪ್ರಗತಿಯ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ.

ಕೇಂದ್ರದ ನಗರಾಭಿವೃದ್ಧಿ ಯೋಜನೆಯ ಬಗ್ಗೆ ವಿಕಾಸಸೌಧದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರದ ನಗರಾಭಿವೃದ್ಧಿ ಕಾರ್ಯದರ್ಶಿ ರಾಜೀವ್ ಗುಬಾ ಇವರು ಸ್ವಚ್ಛ ಭಾರತ ಯೋಜನೆ ಅನುಷ್ಠಾನದಲ್ಲಿ ರಾಜ್ಯಸರ್ಕಾರ ಮಾಡಿರುವ ಕೆಲಸ ತೃಪ್ತಿದಾಯಕವಾಗಿದೆ. ಮೈಸೂರು ಇಡೀ ದೇಶದಲ್ಲೇ ಸ್ವಚ್ಛ ಭಾರತ ಯೋಜನೆಯಡಿ ಪ್ರಥಮ ಸ್ಥಾನ ಗಳಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕೇಂದ್ರದ ನಗರಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆಯಲ್ಲಿ ಆಗುತ್ತಿರುವ ತೊಡಕುಗಳ ಬಗ್ಗೆ ರಾಜ್ಯ ಸರ್ಕಾರದ ಕೆಲ ಅಧಿಕಾರಿಗಳು ಕಡೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು ಇದನ್ನು ಸರಿಪಡಿಸುವ ಭರವಸೆ ನೀಡಿದರು.

ಕೇಂದ್ರ ಸರ್ಕಾರದ ಯೋಜನೆಗಳಾದ ಜೆಎನ್‌ಆರ್‌ಯುಎಂ ಅಮೃತ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯನ್ನು ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಕಾರ್ಯದರ್ಶಿಯವರು ಪರಿಶೀಲನೆ ನಡೆಸಿದರು.

ಈ ಸಭೆಯಲ್ಲಿ ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾದವ್ ಸೇರಿದಂತೆ ನಗರಾಭಿವೃದ್ಧಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.