
ಮೈಸೂರು: ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು ನಗರದ ಅಗ್ರಹಾರದಲ್ಲಿ ನಡೆದಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮೈಸೂರಿನ ಪದ್ಮಾ ಲೋಡಾ ಎಂಬ ಮಹಿಳೆಯನ್ನು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪದ್ಮಾ ಮೃತಪಟ್ಟಿದ್ದಾರೆ ಎಂದು ಮೇ 15ರಂದು ವೈದ್ಯರು ತಿಳಿಸಿದ್ದರು.
ಮಂಗಳವಾರ ಪದ್ಮಾ ಲೋಡಾ ಅವರ ಶವಸಂಸ್ಕಾರ ನಡೆಸುತ್ತಿದ್ದ ವೇಳೆ ಕಣ್ಣು ಬಿಟ್ಟಿರುವ ಅಚ್ಚರಿಯ ಘಟನೆ ನಡೆದಿದೆ. ಮರು ಜೀವ ಪಡೆದ ಪದ್ಮಾರನ್ನು ಕೂಡಲೇ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.
Comments are closed.