ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯಿಂದ ತಮಗೆ ಬೆದರಿಕೆ ಕರೆ ಬಂದಿದೆ ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿದ್ದಾಗ ಅನಾಮಧೇಯ ವ್ಯಕ್ತಿಯಿಂದ ತನಗೆ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತಾನು ಭೂಗತ ಪಾತಕಿ ರವಿ ಪೂಜಾರಿ ಎಂದು ಹೇಳಿದ್ದು, 10 ಕೋಟಿ ರೂ. ಹಣ ನೀಡು. ಒಂದು ವೇಳೆ ಹಣ ಕೊಡದಿದ್ದರೆ ಮಗನ ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸುವುದಾಗಿ ಹೇಳಿದ್ದಾನೆ ಬೆದರಿಕೆ ಹಾಕಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕರೆಯಿಂದ ಗಾಬರಿಗೊಂಡ ರೇವಣ್ಣ, ಸೂಕ್ತ ರಕ್ಷಣೆ ನೀಡಬೇಕು ಮತ್ತು ದೂರವಾಣಿ ಕರೆ ಬಗ್ಗೆ ತನಿಖೆ ನಡೆಸಬೇಕು ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ರೇವಣ್ಣ ಪುತ್ರ ಅನೂಪ್ ನಾಯಕರಾಗಿರುವ ಚೊಚ್ಚಲ ಚಿತ್ರ ‘ಲಕ್ಷ್ಮಣ’ ತೆರೆಗೆ ಬರಲು ಸಿದ್ಧವಾಗಿದೆ.
Comments are closed.