ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಲಯನ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈಲನ್ ಪಂದ್ಯದ ಟಿಕೆಟ್ ಪಡೆಯಲು ಅಭಿಮಾನಿಗಳು ಮುಗಿಬಿದ್ದ ಪರಿಣಾಮ ನೂಕು ನುಗ್ಗಲು, ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ನಡೆಸಿದ ಘಟನೆ ನಡೆದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ಟಿಕೆಟ್ ಪಡೆಯಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ನೂಕು ನುಗ್ಗಲು ಶುರುವಾಗಿದೆ. ಈ ವೇಳೆ ಅಭಿಮಾನಿಗಳು ಗೇಟ್ ಅನ್ನು ಧ್ವಂಸ ಮಾಡಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಬೇಕಾಗಿ ಬಂದಿದೆ.
ಬೆಳಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 12ರ ಕೌಂಟರ್ ನಲ್ಲಿ ಸಾರ್ವಜನಿಕರು ಐಪಿಎಲ್ ಫೈನಲ್ ಪಂದ್ಯದ ಟಿಕೆಟ್ ಪಡೆಯಲು ಅವಕಾಶ ಇದೆ ಎಂಬ ಪ್ರಕಟಣೆ ನೀಡಿತ್ತು.
Comments are closed.