ಕರ್ನಾಟಕ

ಪೊಲೀಸರು ಪ್ರತಿಭಟನೆ ಮಾಡುವಂತಿಲ್ಲ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Pinterest LinkedIn Tumblr

para

ಬೆಂಗಳೂರು, ಮೇ 26- ಪೊಲೀಸರು ಪ್ರತಿಭಟನೆ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಪೊಲೀಸ್ ಇಲಾಖೆ ಶಿಸ್ತು ಮತ್ತು ಸಂಯಮಕ್ಕೆ ಹೆಸರಾಗಿದೆ. ಅವರ ಬೇಡಿಕೆಗಳಿದ್ದರೆ ಅವುಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯ ಅಧಿಕಾರಿಗಳು ಈಗಾಗಲೇ ಸಂಬಂಧಪಟ್ಟವರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜವಳಿ ಸಚಿವ ಬಾಬೂರಾವ್ ಚಿಂಚನಸೂರ್ ವಿರುದ್ಧ ಮೊಕದ್ದಮೆ ದಾಖಲಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಸಚಿವರಾಗಿರುವುದರಿಂದ ಮುಖ್ಯಮಂತ್ರಿ ಅವರ ವ್ಯಾಪ್ತಿಗೆ ಬರುತ್ತದೆ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ಒಂದು ವೇಳೆ ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದರೆ ವರದಿ ಕೇಳುವುದಾಗಿ ಹೇಳಿದರು. ಭಾರೀ ನಿರೀಕ್ಷೆಗಳೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರದ ಎನ್‌ಡಿಎ ಸರ್ಕಾರ ಜನರ ನಿರೀಕ್ಷೆಗಳನ್ನು ತಲುಪಲು ವಿಫಲವಾಗಿದೆ. ಕೇವಲ ಪ್ರಚಾರದಲ್ಲೇ ಕಾಲ ಕಳೆಯುತ್ತಿದೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.

Comments are closed.