ಮಂಡ್ಯ: ತಾಲೂಕಿನ ಸಂಗಾಪುರ ಬಳಿ ಭಾನುವಾರ ಸಂಜೆ ಕಾರು ಪಲ್ಟಿಯಾದ ಪರಿಣಾಮ ಬೆಂಗಳೂರಿನ ದಂಪತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಭುವನೇಶ್ವರಿ ನಗರದ ಸೀತಾರಾಮ್ ರಾಜು(74) ಹಾಗೂ ರತ್ನಮ್ಮ(64) ಮೃತ ದುರ್ಧೈವಿಗಳು.
ಬೆಂಗಳೂರಿನಿಂದ ಮೇಲುಕೋಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.