ಕರ್ನಾಟಕ

ಕಾರು ಅಪಘಾತಕ್ಕೆ ದಂಪತಿ ಬಲಿ

Pinterest LinkedIn Tumblr

accident-graphic-Medium-e1457232646269ಮಂಡ್ಯ: ತಾಲೂಕಿನ ಸಂಗಾಪುರ ಬಳಿ ಭಾನುವಾರ ಸಂಜೆ ಕಾರು ಪಲ್ಟಿಯಾದ ಪರಿಣಾಮ ಬೆಂಗಳೂರಿನ ದಂಪತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸೀತಾರಾಮ್ ರಾಜು(74) ಹಾಗೂ ರತ್ನಮ್ಮ(64) ಮೃತ ದುರ್ಧೈವಿಗಳು.

ಬೆಂಗಳೂರಿನಿಂದ ಮೇಲುಕೋಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.