ಮಂಡ್ಯ: ಕಾರ್ಗೆ ಹಾವು ಅಡ್ಡ ಬಂದಾಗ ಅದನ್ನು ಉಳಿಸಲು ಹೋದಾಗ ನಡೆದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಭುವನೇಶ್ವರಿ ನಗರದ ನಿವಾಸಿಗಳಾದ ರತ್ನಮ್ಮ (62), ಸೀತಾರಾಮ್ರಾಜು (74) ಮೃತ ದಂಪತಿ. ಮಂಡ್ಯದ ಸಂಗಾಪುರ ಗ್ರಾಮದ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ ಹಾವು ಅಡ್ಡ ಬಂದಿದೆ. ಅದನ್ನು ಉಳಿಸಲು ಚಾಲಕ ಕಾರನ್ನು ಪಕ್ಕಕ್ಕೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಬೆಂಗಳೂರಿನಿಂದ ಮೇಲುಕೋಟೆಗೆ ಹೋಗುವಾಗ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದರೆ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.