ಕರ್ನಾಟಕ

ಶೆಣೈ Facebook war; FIR ದಾಖಲಿಸ್ತಾರಂತೆ ..#ಬೃಹನ್ನಳೆಯರು!

Pinterest LinkedIn Tumblr

Anupama-Shenoy1 Faceಬಳ್ಳಾರಿ: ನನ್ನ Facebook ಸ್ತ್ರನೋಡಿ ನನ್ನ ಮೇಲೆ FIR ದಾಖಲಿಸ್ತಾರಂತೆ..#ಬೃಹನ್ನಳೆಯರು…ಇದು ರಾಜಕೀಯ ಹಸ್ತಕ್ಷೇಪದಿಂದ ಬೇಸತ್ತು ಹುದ್ದೆಗೆ ರಾಜೀನಾಮೆ ನೀಡಿ ಸದ್ದು ಮಾಡುತ್ತಿರುವ ಬಳ್ಳಾರಿ ಜಿಲ್ಲೆ ಕೂಡ್ಲಗಿ ಡಿವೈಎಸ್ ಪಿ ಅನುಪಮಾ ಶೆಣೈ(ಅನುಪಮಾ ರೆಬೆಲ್!) ಸೋಮವಾರ ಹೊಸದಾಗಿ ತಮ್ಮ ಫೇಸ್ ಬುಕ್ ನಲ್ಲಿ ಅಪ್ ಡೇಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಫೇಸ್ ಬುಕ್ ನಲ್ಲಿ ಸಮರವನ್ನು ಮುಂದುವರಿಸಿದ್ದಾರೆ.

ಈಗಾಗಲೇ ಅನುಪಮಾ ಶೆಣೈ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಮತ್ತೊಂದೆಡೆ ಇಂದು ಬೆಳಗ್ಗೆ ತಮ್ಮ ಫೇಸ್ ಬುಕ್ ಪೇಜ್ ಸ್ಟೇಟಸ್ ಅಪ್ ಡೇಟ್ ಮಾಡಿರುವ ಅನುಪಮಾ, ಡಿಎಆರ್ ಪೇದೆ ರಾಮಕೃಷ್ಣ ಅವರನ್ನು ವಜಾಗೊಳಿಸಿದ್ದಕ್ಕೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂದು ವ್ಯಂಗ್ಯವಾಡಿದ್ದರು.

ಬಳಿಕ ಇದೀಗ ಫೇಸ್ ಬುಕ್ ನಲ್ಲಿ ಸಕ್ರಿಯವಾಗಿರುವ ಅನುಪಮಾ ಶೆಣೈ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ವರದಿ ಪ್ರಸಾರವಾದ ಬೆನ್ನಲ್ಲೇ ಮತ್ತೆ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್ ಮಾಡುವ ಮೂಲಕ ಸೆಡ್ಡು ಹೊಡೆದಿದ್ದಾರೆ!

ಅವರು ನಮ್ಮೂರಿನವರು ಮನವೊಲಿಸುವ ಪ್ರಯತ್ನ ಮಾಡ್ತೇವೆ: ಖಾದರ್
ಅನುಪಮಾ ಶೆಣೈ ನಮ್ಮೂರಿನವರು…ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇವೆ. ದಿಟ್ಟ ಅಧಿಕಾರಿಗಳನ್ನು ನಮ್ಮ ಸರ್ಕಾರ ಬೆಂಬಲಿಸುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಸುದ್ದಿಗಾರರ ಪ್ರಶ್ನೆಗೆ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
-ಉದಯವಾಣಿ

Comments are closed.