ಕರ್ನಾಟಕ

ಶಾಸಕರು ಮುಂಬೈಗೆ ಹೋಗಿರೋದು ಗೊತ್ತೇ ಇಲ್ಲ: ಸಿದ್ದರಾಮಯ್ಯ

Pinterest LinkedIn Tumblr

Siddaಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರ ಕುದುರೆ ವ್ಯಾಪಾರದ ಭೀತಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಿರುವ 14 ಮಂದಿ ಪಕ್ಷೇತರ ಶಾಸಕರು ಮುಂಬೈಗೆ ತೆರಳಿರೋದು ತಮಗೆ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಬಗ್ಗೆ ನಾನು ಯಾರೊಂದಿಗೂ ಚರ್ಚಿಸಿಲ್ಲ. ಪಕ್ಷೇತರ ಶಾಸಕರು ಮುಂಬೈಗೆ ಹೋಗಿರೋದು ಗೊತ್ತೇ ಇಲ್ಲ ಎಂದು ಹೇಳಿದರು.

ಮತ್ತೊಂದೆಡೆ ಶಾಸಕ ಎಸ್ ಟಿ ಸೋಮಶೇಖರ್ ಜೊತೆ 14 ಮಂದಿ ಪಕ್ಷೇತರ ಶಾಸಕರು ಮುಂಬೈಗೆ ಹೋಗಿದ್ದಾರಂತಲ್ಲ ಎಂದು ಪತ್ರಕರ್ತರು ಮರುಪ್ರಶ್ನಿಸಿದಾಗ, ಸೋಮಶೇಖರ್ ಜೊತೆ ಶಾಸಕರು ಮುಂಬೈಗೆ ಹೋಗಬಾರದಾ? ಎಂದು ಪ್ರಶ್ನಿಸಿದರು. ಅವರು ವೈಯಕ್ತಿಕ ಉದ್ದೇಶದಿಂದ ಮುಂಬೈಗೆ ತೆರಳಿರಬಹುದು ಎಂದು ಹೇಳಿದರು.

ಅನೈತಿಕ ರಾಜಕಾರಣಕ್ಕೆ ಬಿಜೆಪಿ, ಜೆಡಿಎಸ್ ನೇರ ಕಾರಣ ಎಂದು ಆರೋಪಿಸಿರುವ, ಕಾಂಗ್ರೆಸ್ ಪಕ್ಷ ಕೂಡಾ ಯಾರಿಗೂ ಆಮಿಷ ಒಡ್ಡುವುದಿಲ್ಲ. ಇದರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
-ಉದಯವಾಣಿ

Comments are closed.