ಕರ್ನಾಟಕ

ಗ್ರಾ.ಪಂ. ಮಾಜಿ ಸದಸ್ಯ ಸಿನಿಮೀಯ ರೀತಿಯಲ್ಲಿ ಬರ್ಬರ ಕೊಲೆ

Pinterest LinkedIn Tumblr

murder111

ಬೆಂಗಳೂರು: ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾ.ಪಂ. ಮಾಜಿ ಸದಸ್ಯನನ್ನು ಸಿನೀಮಿಯ ರೀತಿ ಬೆನ್ನಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾನುಕುಂಟೆ ಗ್ರಾ.ಪಂ. ಮಾಜಿ ಸದಸ್ಯ ತಿರುಪತಯ್ಯ (50) ಕೊಲೆಯಾದವರು. ರಾಜಾನುಕುಂಟೆಯ ಶ್ರೀರಾಮನಹಳ್ಳಿಯಲ್ಲಿ ಜಾತ್ರಾಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಸಂಜೆ ಆರು ಗಂಟೆಯಲ್ಲಿ ತಿರುಪತಯ್ಯ ಆಗಮಿಸಿದ್ದರು. ಈ ಸಮಯವನ್ನೇ ಕಾಯುತ್ತಿದ್ದ ಆರು ಮಂದಿ ದುಷ್ಕರ್ಮಿಗಳ ತಂಡ ಸಿನಿಮೀಯ ರೀತಿಯಲ್ಲಿ ಏಕಾಏಕಿ ದಾಳಿ ಮಾಡಿ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನೋಡುನೋಡುತ್ತಿದ್ದಂತೆಯೇ ರಕ್ತದ ಮಡುವಿನಲ್ಲಿ ಕುಸಿದು ಬಿದ್ದ ತಿರುಪತಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಾತ್ರೆಗೆ ಸೇರಿದ್ದ ಜನರಿಗೆ ಇಲ್ಲಿ ಏನು ನಡೆಯುತ್ತಿದೆ ಎಂಬುದು ಅರಿವಾಗುವಷ್ಟರಲ್ಲೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.

ಸುದ್ದಿ ತಿಳಿದ ಡಿವೈಎಸ್ಪಿ ಕೋನಪ್ಪ ರೆಡ್ಡಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ ಕೆಲವೇ ಅವಧಿಯಲ್ಲಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ ಶ್ರೀರಾಮನಹಳ್ಳಿಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಬಾಲಾಜಿ ಮತ್ತು ಎಎಸ್‌ಐ ಶ್ರೀನಿವಾಸ್ ಮೊಕ್ಕಾಂ ಹೂಡಿದ್ದಾರೆ.

Comments are closed.