ಬೆಂಗಳೂರು: ಬಿಜೆಪಿಯ ರಾಜ್ಯಸಭೆ ಅಭ್ಯರ್ಥಿಯಾದ ನಿರ್ಮಲಾ ಸೀತಾರಾಮನ್ ಜಯಗಳಿಸಿದ್ದರಿಂದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಜೇತ ಅಭ್ಯರ್ಥಿಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಹೂಗುಚ್ಚ ನೀಡಿ ಅಭಿನಂಧಿಸಿದರು.
ಮತ್ತೊಬ್ಬ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಇತರ ನಾಯಕರು ಬಿಜೆಪಿ ಕಚೇರಿಗೆ ಆಗಮಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಜಯಗಳಿಸಿದ್ದಾರೆ ಎಂದು ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು.
Comments are closed.