ಬೆಂಗಳೂರು ಜು.27 : ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯ ಹೊರವಲಯದ ವರೂರು ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಪ್ರಯಾಣಿಕರು ಸಜೀವ ದಹನಗೊಂಡಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಹುಬ್ಬಳ್ಳಿ ಹೊರವಲಯದ 20. ಕಿ. ಮೀ ದೂರದಲ್ಲಿರುವ ವರೂರು ಗ್ರಾಮದ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ದುರ್ಗಾಂಬಾ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್’ನಲ್ಲಿ ಮುಂಜಾನೆ ಸುಮಾರು 05.30ಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. 15ಕ್ಕೂ ಹೆಚ್ಚು ಮಂದಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದು ಮೂವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
Comments are closed.